ಹನುಮಸಾಗರ: ಇಲ್ಲಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್ ಅನುದಾನದಡಿ ₹1.20 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಉದ್ಘಾಟಿಸಿ ಸಾರ್ವಜನಿಕರ ಸೇವೆಗೆ ನೀಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
‘ಕಟ್ಟಡ ನಿರ್ಮಾಣವಾಗಿ ಸುಮಾರು ಆರು ತಿಂಗಳು ಕಳೆದರೂ ಉದ್ಘಾಟನೆಯಾಗಿಲ್ಲ. ಹಳೆಯ ಕಟ್ಟಡದಲ್ಲಿ ಸ್ಥಳದ ಅಭಾವ ಇರುವುದರಿಂದ ರೋಗಿಗಳಿಗೆ, ಗರ್ಭಿಣಿಯರಿಗೆ ತುಂಬಾ ತೊಂದರೆಯಾಗಿದೆ. ಶಿಥಿಲಗೊಂಡಿರುವ ಹಳೆಯ ಕಟ್ಟಡವನ್ನೇ ಅವಲಂಬಿಸಬೇಕಾಗಿದೆ’ ಎಂದು ಗ್ರಾಮದ ಬಸವರಾಜ
ಪಾಟೀಲ ಹೇಳಿದರು.
ತಾಲ್ಲೂಕು ವೈದ್ಯಾಧಿಕಾರಿ ಡಾ. ಆನಂದ ಗೋಟೂರ ಮಾಹಿತಿ ನೀಡಿ, ‘ಸಣ್ಣ ಪುಟ್ಟ ಕೆಲಗಳು ಬಾಕಿ ಇವೆ. ಕಟ್ಟಡಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ತೆಗೆದುಕೊಳ್ಳಲಾಗಿದೆ.