ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಚು ಹೂಡಿದ ವಿಚಾರವಾಗಿ ಅಡ್ವಾಣಿ ಸೇರಿದಂತೆ 12 ಮಂದಿ ವಿರುದ್ಧ ಇರುವ ಆರೋಪವನ್ನು ಕಳೆದ ತಿಂಗಳು ಎತ್ತಿಹಿಡಿದಿದ್ದ ಸುಪ್ರೀಂ ಕೋರ್ಟ್, ಆರೋಪಿಗಳ ವಿರುದ್ಧ ಒಂದು ತಿಂಗಳ ಒಳಗೆ ದೋಷಾರೋಪ ದಾಖಲಿಸುವಂತೆ ಲಖನೌನಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸೂಚಿಸಿತ್ತು. ಎರಡು ವರ್ಷಗಳ ಒಳಗಾಗಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚಿಸಿತ್ತು.