ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಪಕ್ಷಕ್ಕೆ ನೀವು ಸೇರಬೇಡಿ, ಪಕ್ಷಗಳು ನಿಮ್ಮನ್ನು ಸೇರಲಿ

Last Updated 25 ಮೇ 2017, 12:52 IST
ಅಕ್ಷರ ಗಾತ್ರ

ನವದೆಹಲಿ: ಜನರು ನಿಮ್ಮ ಜತೆಗಿದ್ದಾರೆ. ನೀವು ರಾಜಕೀಯ ಪಕ್ಷಕ್ಕೆ ಸೇರುವ ಬದಲು ರಾಜಕೀಯ ಪಕ್ಷಗಳು ನಿಮ್ಮನ್ನು ಸೇರಲಿ ಎಂದು ರಜನಿಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಬಿಜೆಪಿ ನಾಯಕ, ಬಾಲಿವುಡ್  ನಟ ಶತ್ರುಘ್ನ ಸಿನ್ಹಾ ಟ್ವೀಟ್ ಮಾಡಿದ್ದಾರೆ.

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಹಾಡಿ ಹೊಗಳಿ ಸರಣಿ ಟ್ವೀಟ್ ಮಾಡಿರುವ ಸಿನ್ಹಾ ಅವರು ರಜನಿಕಾಂತ್ ಅವರನ್ನು  ತಮಿಳುನಾಡಿನ ಟೈಟಾನಿಕ್ ಹೀರೋ ಎಂದಿದ್ದಾರೆ. ಜನರು ನಿಮ್ಮೊಂದಿಗೆ ಇದ್ದಾರೆ. ಅವರೆಲ್ಲರೂ ನಿಮ್ಮೊಂದಿಗೆ ಸೇರಲು ಸಿದ್ಧರಿದ್ದಾರೆ. ರಜನಿಕಾಂತ್ ಅವರು ಎಷ್ಟು ಬೇಗ ರಾಜಕೀಯಕ್ಕೆ ಪ್ರವೇಶಿಸುತ್ತಾರೋ, ಅದು ದೇಶಕ್ಕೆ ಒಳ್ಳೆಯದು.

ಕುಟುಂಬ, ಸ್ನೇಹಿತರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅವರು ತೀರ್ಮಾನ ತೆಗೆದುಕೊಳ್ಳಲಿ. ರಜನಿಯವರ ರಾಜಕೀಯ ಪ್ರವೇಶಕ್ಕಾಗಿ ಇಡೀ ದೇಶವೇ ತುದಿಗಾಲಲ್ಲಿ ನಿಂತು ಕಾಯುತ್ತಿದೆ ಎಂದು ಸಿನ್ಹಾ ಟ್ವೀಟ್  ಮಾಡಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ರಜನಿಕಾಂತ್ ಅವರು ರಾಜಕೀಯ ಪ್ರವೇಶ ಬಗ್ಗೆ ಸುಳಿವು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT