ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಡಹಗಲೇ ವ್ಯಕ್ತಿಯನ್ನು ಅಟ್ಟಾಡಿಸಿ ಹತ್ಯೆ; ಮೂಕ ಪ್ರೇಕ್ಷಕರಾದ ಜನ

Last Updated 25 ಮೇ 2017, 16:10 IST
ಅಕ್ಷರ ಗಾತ್ರ

ಕಡಪಾ: ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬನನ್ನು ಅಟ್ಟಾಡಿಸಿಕೊಂಡು ಬಂದು ನಡುರಸ್ತೆಯಲ್ಲಿ ಕೊಲೆ ಮಾಡಲಾಗಿದೆ. ಜನರು ನೋಡುತ್ತಿದ್ದಂತೆಯೇ ಇಬ್ಬರು ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಮಾರುತಿ ರೆಡ್ಡಿ (32) ಕೊಲೆಯಾದ ವ್ಯಕ್ತಿ. ನಡು ರಸ್ತೆಯಲ್ಲಿ ಮಾರುತಿ ರೆಡ್ಡಿಯನ್ನು ಕೊಲೆ ಮಾಡುವಾಗ ಜನರು ಮೂಕ ಪ್ರೇಕ್ಷಕರಾಗಿ ನಿಂತಿದ್ದರು. ಇನ್ನು ಕೆಲವರು ತಮ್ಮ ಮೊಬೈಲ್ ಫೋನ್‌‍ಗಳಲ್ಲಿ ಕೊಲೆಯ ದೃಶ್ಯವನ್ನು ಸೆರೆ ಹಿಡಿದಿದ್ದಾರೆ.

ಮಾರುತಿ ರೆಡ್ಡಿ ನ್ಯಾಯಾಲಯಕ್ಕೆ ಹೋಗುತ್ತಿದ್ದ ವೇಳೆ ಈ ದಾಳಿ ನಡೆದಿದೆ. ಆ ವೇಳೆ ಓಡಿ ಹೋಗಲು ರೆಡ್ಡಿ ಯತ್ನಿಸಿದ್ದರೂ ಮಚ್ಚು ಹಿಡಿದುಕೊಂಡು ಓಡಿ ಬಂದ ರೌಡಿಗಳು ನಡು ರಸ್ತೆಯಲ್ಲೇ ಕೊಚ್ಚಿ ಕೊಲೆಮಾಡಿದ್ದಾರೆ. ಒಬ್ಬ ವ್ಯಕ್ತಿ ರೆಡ್ಡಿಯನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದು, ಇನ್ನೊಬ್ಬ ರೆಡ್ಡಿ ಮೇಲೆ ಮಚ್ಚಿನಿಂದ ಹೊಡೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರೆಡ್ಡಿಯ ಕೊಲೆಗಾರರು ಪೊಲೀಸರಿಗೆ ಶರಣಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇವರೆಲ್ಲರೂ ಸಂಬಂಧಿಕರೇ ಎಂದು ಹೇಳಲಾಗುತ್ತಿದೆ. ಅಕ್ರಮ ಸಂಬಂಧವೇ ಈ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT