ಮೈಸೂರು: ಬಂಡೀಪುರ ರಾಷ್ಟ್ರೀಯ ಉದ್ಯಾನದ ಕಕ್ಕೇಹಳ್ಳದ ಬಳಿ ಒಂಟಿ ಸಲಗ ದಾಂಧಲೆ ನಡೆಸಿದೆ ಎಂಬ ಸುದ್ದಿ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ.
ಕೆಎಸ್ಆರ್ಟಿಸಿ ಬಸ್ನ್ನು ಅಟ್ಟಿಸಿಕೊಂಡು ಆನೆ ಬಂದಿದ್ದರಿಂದ ಬಸ್ ಹಿಮ್ಮುಖವಾಗಿ ಚಲಿಸಿದೆ. ಇದರಿಂದ ಬಸ್ಸಿನ ಗಾಜು ಪುಡಿಯಾಯಿತು.
ನಂತರ, ಟೊಮೆಟೊ ತುಂಬಿಕೊಂಡು ಹೋಗುತ್ತಿದ್ದ ಲಾರಿ ಮೇಲೂ ಆನೆ ದಾಳಿ ನಡೆಸಿತು ಎನ್ನಲಾಗಿದೆ. ಆದರೆ, ಈ ಸುದ್ದಿಯನ್ನು ಅರಣ್ಯ ಇಲಾಖೆ ಹಾಗೂ ಕೆಎಸ್ಆರ್ಟಿಸಿ ಅಧಿಕಾರಿಗಳು ಖಚಿತಪಡಿಸಿಲ್ಲ.