ಹುಬ್ಬಳ್ಳಿ: ‘ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ನೀಡಿರುವ ವೆಂಕಟೇಶಗೌಡ ಮತ್ತು ನನಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿ ಕಚೇರಿಯಲ್ಲಿ ದೂರು ಟೈಪಿಂಗ್ ಆಗಿದೆ ಎಂದು ಅವರು ಆರೋಪಿಸಿದ್ದಾರೆ.
ಅದನ್ನು ಸಾಬೀತು ಮಾಡಿದರೆ ಅವರ ಮನೆಗೇ ಹೋಗಿ ಕ್ಷಮೆ ಕೇಳಲು ಸಿದ್ಧ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.
‘ಕುಮಾರಸ್ವಾಮಿ ಕಡೆಯವರೇನು ಬಿಜೆಪಿ ಕಚೇರಿಯಲ್ಲಿದ್ದಾರೆಯೇ? ದೂರು ಕೊಟ್ಟವರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು. ಇಲ್ಲವೇ ತಾವು ತಪ್ಪು ಮಾಡಿಲ್ಲ ಎಂಬುದನ್ನು ಅವರು ಸಾಬೀತುಪಡಿಸಬೇಕು.
ಅಕ್ರಮ ಗಣಿಗಾರಿಕೆ ಬಗ್ಗೆ ಪುಸ್ತಕ ಪ್ರಕಟಿಸಿದ್ದು ನಿಜ. ಕೋರ್ಟ್ನಲ್ಲಿ ಅದು ಇತ್ಯರ್ಥವಾಗಲಿದೆ. ಪ್ರಚಾರಕ್ಕಾಗಿ ‘ಹಿಟ್ ಅಂಡ್ ರನ್’ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.