ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನಲ್ಲಿ ಇಬ್ಬರು ಯುವಕರು ಕಣ್ಮರೆ

Last Updated 25 ಮೇ 2017, 19:30 IST
ಅಕ್ಷರ ಗಾತ್ರ
ಕನಕಪುರ: ತಾಲ್ಲೂಕಿನ ಹುಲಿಬೆಲೆ ಗ್ರಾಮದ ದೊಡ್ಡ ಹಳ್ಳದಲ್ಲಿ ಉಂಟಾದ ಮಳೆ ನೀರಿನ ಪ್ರವಾಹದಲ್ಲಿ ಇಬ್ಬರು ನಾಪತ್ತೆಯಾಗಿದ್ದು, ನೀರಿನಲ್ಲಿ ಕೊಚ್ಚಿ ಹೋಗಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.
 
ಚನ್ನಪಟ್ಟಣ ತಾಲ್ಲೂಕಿನ ಮೊಳೇದೊಡ್ಡಿ ಗ್ರಾಮದ ದೇವರಾಜು (30) ಹಾಗೂ ಅಜಯ್‌ (30) ನಾಪತ್ತೆಯಾಗಿದ್ದು, ಬುಧವಾರ ರಾತ್ದೊಡ್ಡ ಹಳ್ಳದಲ್ಲಿನ  ನೆಲಮಟ್ಟದ ಸೇತುವೆಯ ಮೇಲೆ ಹರಿಯುತ್ತಿದ್ದ ಮಳೆ ನೀರಿನ ಪ್ರವಾಹವನ್ನು ಲೆಕ್ಕಿಸದೇ ಮೊಪೆಡ್‌ನಲ್ಲಿ ಸೇತುವೆ ದಾಟಲು ಮುಂದಾಗಿದ್ದರು. ಈ ಸಂದರ್ಭ ಪ್ರವಾಹದ ಸೆಳೆತಕ್ಕೆ ಸಿಕ್ಕು ನಾಪತ್ತೆಯಾದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.
 
‘ಗುರುವಾರ ರಾತ್ರಿಯವರೆಗೂ ಅವರ ಸುಳಿವು ಪತ್ತೆ ಆಗಿರಲಿಲ್ಲ’ ಎಂದು ರಾಮನಗರ ಎಸ್ಪಿ ಬಿ. ರಮೇಶ್‌ ‘ಪ್ರಜಾವಾಣಿ’ಗೆ ತಿಳಿಸಿದರು
 
ಹಲವೆಡೆ ಮಳೆ(ಬೆಂಗಳೂರು ವರದಿ): ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಮಳೆಯಾಗಿದೆ.

ಹವಾಮಾನ ಮುನ್ಸೂಚನೆ:  ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT