ಲಖನೌ: ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಗೆ ಇದೇ 30ರಂದು ಖುದ್ದಾಗಿ ಹಾಜರಾಗುವಂತೆ ಬಿಜೆಪಿ ಮುಖಂಡರಾದ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಷಿ ಹಾಗೂ ಉಮಾ ಭಾರತಿ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯವು ಗುರುವಾರ ಸಮನ್ಸ್ ಜಾರಿ ಮಾಡಿದೆ.
ಆರು ಆರೋಪಿಗಳ ಪೈಕಿ ಐದು ಮಂದಿ ಹಾಜರಾತಿಯಿಂದ ವಿನಾಯಿತಿ ಕೋರಿದ ಕಾರಣ ಇದೇ 30ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ, ಯಾವ ಕಾರಣಕ್ಕೂ ಮತ್ತೆ ವಿಚಾರಣೆ ಮುಂದೂಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಪ್ರಕರಣದ ಆರು ಆರೋಪಿಗಳ ವಿರುದ್ಧ ಗುರುವಾರ ಆರೋಪಗಳನ್ನು ನಿಗದಿಪಡಿಸುವುದಾಗಿ ಕೋರ್ಟ್ ಈ ಮೊದಲು ತಿಳಿಸಿತ್ತು.
ಆರು ಮಂದಿ ಪೈಕಿ ಆರೋಪಿ ಶಿವಸೇನಾ ಮುಖಂಡ ಸತೀಶ್ ಪ್ರಧಾನ್ ಅವರು ಮಾತ್ರ ಕೋರ್ಟ್ಗೆ ಹಾಜರಿದ್ದರು.