ನವದೆಹಲಿ: ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆ ಶುಕ್ರವಾರ ಉದ್ಘಾಟನೆಯಾಗಲಿದೆ.
ಪ್ರಧಾನಿ ನರೇಂದ್ರ ಮೋದಿ ಈ ಸೇತುವೆಯನ್ನು ಉದ್ಘಾಟಿಸಲಿದ್ದಾರೆ.
9.3 ಕಿಲೋ ಮೀಟರ್ ಉದ್ದದ ಈ ಸೇತುವೆ ಅರುಣಾಚಲ ಪ್ರದೇಶದ ಧೋಲಾ ಮತ್ತು ಅಸ್ಸಾಂನ ಸಾಧಿಯಾಗೆ ಸಂಪರ್ಕಿಸಲಿದೆ.
‘ಮನ್ ಕಿ ಬಾತ್’ ಇಂದು ಬಿಡುಗಡೆ
ನವದೆಹಲಿ (ಪಿಟಿಐ): ಪ್ರಧಾನಿ ನರೇಂದ್ರ ಅವರ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ ಪುಸ್ತಕ ರೂಪದಲ್ಲಿ ಶುಕ್ರವಾರ ಬಿಡುಗಡೆಗೊಳ್ಳಲಿದೆ.