ಕೋಲ್ಕತ್ತ : ಭ್ರಷ್ಟಾಚಾರ ಆರೋಪ ಹೊತ್ತ ಟಿಎಂಸಿ ಮುಖಂಡರ ಬಂಧನಕ್ಕೆ ಒತ್ತಾಯಿಸಿ ಪೊಲೀಸ್ ಮುಖ್ಯಕಚೇರಿವರೆಗೆ ಬಿಜೆಪಿ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ಭಾರಿ ಘರ್ಷಣೆ ನಡೆದಿದೆ.
ಕೋಲ್ಕತ್ತದ ವಿವಿಧ ಪ್ರದೇಶಗಳಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸರ ಜತೆ ಘರ್ಷಣೆಗಿಳಿದರು. ಗುಂಪು ಚುದರಿಸಲು ಅಶ್ರುವಾಯು, ಜಲಫಿರಂಗಿ ಬಳಸಿದ ಪೊಲೀಸರು, ಕೆಲವೆಡೆ ಲಾಠಿ ಪ್ರಹಾರವನ್ನೂ ಮಾಡಿದರು.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ, ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಮತ್ತು ಪಕ್ಷದ ರಾಜ್ಯಸಭಾ ಸದಸ್ಯೆ ರೂಪಾ ಗಂಗೂಲಿ ಅವರನ್ನು ಪೊಲೀಸರು ವಶಕ್ಕೆ ಪಡೆದರು.