ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂಬ್ಳೆ ನಿರ್ಗಮನ ಬಹುತೇಕ ಖಚಿತ

Last Updated 25 ಮೇ 2017, 19:27 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್  ನೇಮಕಕ್ಕೆ ಬಿಸಿಸಿಐ ಗುರುವಾರ ಅರ್ಜಿ ಆಹ್ವಾನಿಸಿದೆ. ಆದ್ದರಿಂದ  ಸದ್ಯ ಆ ಸ್ಥಾನದಲ್ಲಿರುವ ಅನಿಲ್ ಕುಂಬ್ಳೆ ಅವರು ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್ ಟೂರ್ನಿಯ ನಂತರ ನಿರ್ಗಮಿಸುವುದು ಬಹುತೇಕ ಖಚಿತವಾಗಿದೆ.

ಮುಂದಿನ ತಿಂಗಳು ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್ ಟೂರ್ನಿ ಮುಗಿದ ನಂತರ ಕುಂಬ್ಳೆ ಅವರ  ಒಂದು ವರ್ಷದ  ಅವಧಿಯ ಒಪ್ಪಂದವು ಪೂರ್ಣಗೊಳ್ಳಲಿದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದೆ. 

ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿ.ವಿ.ಎಸ್. ಲಕ್ಷ್ಮಣ್  ಅವರು ಇರುವ ಬಿಸಿಸಿಐನ ಕ್ರಿಕೆಟ್ ಸಲಹಾ ಸಮಿತಿಯು (ಸಿಎಸಿ) ಅಭ್ಯರ್ಥಿಗಳ ಸಂದರ್ಶನ ನಡೆಸಲಿದೆ. ಸಂದರ್ಶನದ ದಿನಾಂಕ ನಿಗದಿಯಾಗಿಲ್ಲ.

ಕುಂಬ್ಳೆ ಅವರು ತಮ್ಮ ಹಾಗೂ ತಂಡದ ಆಟಗಾರರ ಸಂಭಾವನೆಯನ್ನು ಹೆಚ್ಚಳ ಮಾಡಬೇಕು ಎಂದು ಈಚೆಗೆ ಪ್ರಸ್ತಾವ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT