ಸಹಾಯಕ ಪ್ರಾಧ್ಯಾಪಕಿ ಡಾ.ದೀಪಾ, ‘ಕೃತಿಚೌರ್ಯ ಸದ್ಯ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ಪಿಎಚ್.ಡಿ ಹಾಗೂ ಇತರ ಸಂಶೋಧನಾ ಪ್ರಬಂಧಗಳಲ್ಲಿ ಕೃತಿಚೌರ್ಯ ಹಾವಳಿ ಹೆಚ್ಚಾಗಿದ್ದು, ಅದನ್ನು ಪರೀಕ್ಷಿಸಲು ಆನ್ಲೈನ್ನಲ್ಲಿ ಕೆಲವು ಉಚಿತ ಅಪ್ಲಿಕೇಷನ್ಗಳಿವೆ. ಆದರೆ ಅವುಗಳು ಪರಿಣಾಮಕಾರಿಯಾಗಿಲ್ಲ. ವಾಕ್ಯವನ್ನು ಬದಲಾಯಿಸಿ ನೀಡಿದರೆ ಗುರುತಿಸುವುದಿಲ್ಲ’ ಎಂದು ವಿವರಿಸಿದರು.
‘ಈ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಲು, ಪರಿಣಾಮಕಾರಿಯಾಗಿ ಕೆಲಸ ಮಾಡುವ ವೆಬ್ ಆಧಾರಿತ ಅಪ್ಲಿಕೇಷನ್ ಅಭಿವೃದ್ಧಿ ಪಡಿಸಿದ್ದೇವೆ. ಅನೇಕ ಹಂತಗಳ ದತ್ತಾಂಶ ಪರೀಕ್ಷೆ ನಡೆಸಲಾಗಿದೆ. ವಿವಿಧ ಸಂಶೋಧನಾ ಗ್ರಂಥಗಳ ದತ್ತಾಂಶವನ್ನು ಇದಕ್ಕೆ ಅಳವಡಿಸುವ ಕೆಲಸ ಬಾಕಿ ಇದ್ದು, ಅದು ಪೂರೈಸಿದ ನಂತರ ಸಾರ್ವಜನಿಕರ ಉಪಯೋಗಕ್ಕೆ ನೀಡಲಾಗುವುದು’ ಎಂದು ಹೇಳಿದರು.
ಪ್ರಾಧ್ಯಾಪಕ ಡಾ. ಅಮಲೇಂದು ಜ್ಯೋತಿಷಿ, ‘ಬಹಳಷ್ಟು ಜನರು ಅಪೌಷ್ಠಿಕತೆಯಿಂದ ಬಳಲುತ್ತಿದ್ದು, ಅವರಿಗೆ ಆಹಾರವಾಗಿ ಅತ್ಯಂತ ಕಡಿಮೆ ಬೆಲೆಯ ಸಮುದ್ರ ಮೀನುಗಳನ್ನು ಆಹಾರವಾಗಿ ಲಭ್ಯವಾಗುಂತೆ ಮಾಡುವ ಬಗ್ಗೆ ಅಧ್ಯಯನ ನಡೆಸಿದ್ದೇವೆ’ ಎಂದರು.
‘ಬಡತನ ಹೆಚ್ಚಿರುವ ದಕ್ಷಿಣ ಏಷ್ಯಾ ಮತ್ತು ಪಶ್ಚಿಮ ಆಫ್ರಿಕಾ ಪ್ರದೇಶಗಳನ್ನು ಗಮನದಲ್ಲಿ ಇರಿಸಿಕೊಂಡು ಈ ಸಂಶೋಧನೆ ನಡೆಸಿದ್ದೇವೆ. ಮೀನು ಬೆಳೆಯುವುದು ಸಣ್ಣ ಪ್ರಮಾಣದ ಉದ್ಯಮವಾಗುವುದರಿಂದ ಆರ್ಥಿಕ ಸ್ಥಿತಿ ಸುಧಾರಣೆ ಆಗುತ್ತದೆ’ ಎಂದು ತಿಳಿಸಿದರು.