ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಅಹವಾಲು ಸ್ವೀಕಾರ ಸಭೆಯಲ್ಲಿ ಅವರು ಮಾತನಾಡಿದರು. ‘ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ಅಡಿ ಪ್ರವೇಶ ನೀಡುವಾಗ ಹಣ ಪಡೆದರೆ, ಅಧಿಕಾರಿಗಳು ಸಕಾಲಕ್ಕೆ ಕಡತ ವಿಲೇವಾರಿ ಮಾಡದಿದ್ದರೆ, ಕೆಲಸದಲ್ಲಿ ಲೋಪ ಎಸಗಿದ್ದರೆ ನಾಗರಿಕರು ಲೋಕಾಯುಕ್ತಕ್ಕೆ ದೂರು ನೀಡಿದರೆ, ಕರ್ತವ್ಯಲೋಪ ಎಸಗುವ ಮತ್ತು ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ’ ಎಂದು ತಿಳಿಸಿದರು.