ಕೊಲಂಬೊ: ಶ್ರೀಲಂಕಾದಲ್ಲಿ ಶುಕ್ರವಾರ ಸುರಿದ ಧಾರಾಕಾರ ಮಳೆ ಹಾಗೂ ಭೂ ಕುಸಿತದಿಂದಾಗಿ 25 ಜನ ಸಾವನ್ನಪ್ಪಿದ್ದು, 42ಕ್ಕೂ ಹೆಚ್ಚು ಜನ ನಾಪತ್ತೆಯಾಗಿರುವ ಘಟನೆ ಸಂಭವಿಸಿದೆ.
400 ಮಂದಿ ಸೇನಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಸುಮಾರು 7800ಕ್ಕೂ ಹೆಚ್ಚು ಜನ ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.
ದ್ವೀಪ ರಾಷ್ಟ್ರ ಲಂಕಾದಲ್ಲಿ ಈ ವರ್ಷ ದಾಖಲಾಗಿರುವ ಅತಿ ಹೆಚ್ಚಿನ ಪ್ರಮಾಣದ ಮಳೆ ಇದಾಗಿದ್ದು, ದೇಶದ ಪಶ್ಚಿಮ ಕರಾವಳಿ ವ್ಯಾಪ್ತಿಯಲ್ಲಿರುವ ಕಲುತರಾ ಜಿಲ್ಲೆಯ ಐದು ಕಡೆ ಭೂಕುಸಿತ ಸಂಭವಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಲಂಕಾ ಗೃಹ ಖಾತೆ ವ್ಯವಹಾರಗಳ ಸಚಿವ ವಾಜಿರಾ ಅಬೇವರ್ಧನ ಮುಂದಿನ 72 ಗಂಟೆಗಳಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಮುನ್ಸೂಚನೆಯಿದೆ ಎಂದು ಎಚ್ಚರಿಸಿದ್ದಾರೆ.