ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ

Last Updated 26 ಮೇ 2017, 20:12 IST
ಅಕ್ಷರ ಗಾತ್ರ

ನವದೆಹಲಿ: ತಮ್ಮ ಪತ್ನಿ ಸುನಂದಾ ಪುಷ್ಕರ್‌  ಕುರಿತು ಅವಹೇಳನಕಾರಿ ವರದಿ ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಅವರು ಪತ್ರಕರ್ತ ಅರ್ನಬ್‌ ಗೋಸ್ವಾಮಿ ಮತ್ತು ರಿಪಬ್ಲಿಕ್‌ ಸುದ್ದಿ ವಾಹಿನಿ ವಿರುದ್ಧ ₹2 ಕೋಟಿ ಮೊತ್ತದ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ದೆಹಲಿ ಹೈಕೋರ್ಟ್‌ನಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಸಿರುವ ತರೂರು ಅವರು, ತನಿಖೆ ಸಂಪೂರ್ಣವಾಗಿ ಮುಗಿಯುವವರೆಗೂ ತಮ್ಮ ಪತ್ನಿಯ ಸಾವಿಗೆ ಸಂಬಂಧಿಸಿದ ಯಾವುದೇ ವರದಿ ಪ್ರಸಾರ ಮಾಡದಂತೆ ಈ ಸುದ್ದಿ ವಾಹಿನಿಗೆ ನಿರ್ದೇಶನ ನೀಡುವಂತೆ ಕೋರಿದ್ದಾರೆ.

ಮೇ18ರಿಂದ 13ರವರೆಗೆ ಪ್ರಸಾರವಾದ ವರದಿಗಳಿಗೆ ಸಂಬಂಧಿಸಿದಂತೆ ತರೂರು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಈ ರೀತಿಯ ವರದಿಗಳು ತನಿಖೆ  ಮೇಲೆ ಪರಿಣಾಮ ಬೀರಲಿವೆ.  ಅಲ್ಲದೆ ವೈಯಕ್ತಿಕ ವರ್ಚಸ್ಸಿಗೂ ದಕ್ಕೆಯಾಗಲಿದೆ ಎಂದು ಅವರು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT