ರೈತ ಸಂವಾದ ಕಾರ್ಯಕ್ರಮವನ್ನು ಕೇಪು ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರಾನಾಥ ಆಳ್ವ ಉದ್ಘಾಟಿಸಿದರು. ಅಳಿಕೆ ತಾಲ್ಲೂಕು ಪಂಚಾಯಿತಿ ಸದಸ್ಯ ಪದ್ಮನಾಭ ನಾಯ್ಕ, ಆದಂ, ವಿಟ್ಲ ಮೂಡ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲತಾ, ಉಪಾಧ್ಯಕ್ಷ ದಯಾನಂದ ಶೆಟ್ಟಿ ಅಬೀರಿ, ಅನಂತಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸನತ್ ಕುಮಾರ್ ರೈ, ವಿಟ್ಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಮಾನಾಥ ವಿಟ್ಲ, ಮಂಗಳೂರು ಕೃಷಿ ಉಪ ನಿರ್ದೇಶಕ ಡಾ. ಮುನಿಯ ಗೌಡ, ಸಂಪನ್ಮೂಲ ವ್ಯಕ್ತಿಗಳಾದ ಮಂಗಳೂರು ರೈತ ಕೇಂದ್ರದ ವಿಜ್ಞಾನಿ ಹರೀಶ್ ಶೆಣೈ, ಬಂಟ್ವಾಳ ಸಹಾಯಕ ತೋಟಗಾರಿಕಾ ಅಧಿಕಾರಿ ದಿನೇಶ್ ಭಾಗವಹಿಸಿದ್ದರು.