ಕೇಂದ್ರ ಸರ್ಕಾರ ಅಧಿಸೂಚನೆ:
‘ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ (ಜಾನುವಾರು ಮಾರುಕಟ್ಟೆಗಳ ನಿಯಂತ್ರಣ) ನಿಯಮ–2017’ ಅನ್ನು ಅಂತಿಮಗೊಳಿಸಿ ಕೇಂದ್ರ ಪರಿಸರ ಸಚಿವಾಲಯ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಆದೇಶದ ಅನ್ವಯ, ಜಾನುವಾರುಗಳನ್ನು ಕೃಷಿ ಉದ್ದೇಶಕ್ಕೆ ಮಾತ್ರ ಖರೀದಿಸಬಹುದಾಗಿದೆ. ಈ ನಿರ್ಧಾರವು ದೇಶದ ಮಾಂಸ ಉದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ.