ಆಕ್ರಂದನ: ದುರ್ಘಟನೆಯಲ್ಲಿ ಮೃತಪಟ್ಟ ಇಬ್ಬರೂ ಚನ್ನಪಟ್ಟಣ ತಾಲ್ಲೂಕಿನ ಮೊಳೇದೊಡ್ಡಿ ಗ್ರಾಮದವರಾಗಿದ್ದು, ಶವಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆಂದು ತರಲಾಗಿತ್ತು. ಅಲ್ಲಿ ಈ ಇಬ್ಬರ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.ಪರಿಹಾರಕ್ಕೆ ಒತ್ತಾಯ: ಹಳ್ಳದಲ್ಲಿ ಕೊಚ್ಚಿ ಹೋದ ಇಬ್ಬರ ಕುಟುಂಬದವರಿಗೂ ಸೂಕ್ತ ಪರಿಹಾರ ನೀಡುವಂತೆ ಅವರ ಸಂಬಂಧಿಕರು ಜಿಲ್ಲಾಡಳಿತವನ್ನು ಆಗ್ರಹಿಸಿದರು.