‘310 ಅರ್ಜಿಗಳನ್ನು ಇತ್ಯರ್ಥ ಮಾಡಲಾಗಿದ್ದು, ಉಳಿದ ಅರ್ಜಿಗಳ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಡಳಿತ ಕೇವಲ ಬಾಯಿ ಮಾತಿನಲ್ಲಿ ಹೇಳುತ್ತಿದೆ. ಸರ್ವೆ ಕಾರ್ಯ ನಡೆದು ಆರೇಳು ತಿಂಗಳು ಕಳೆದರೂ ಇನ್ನೂ ಹಕ್ಕುಪತ್ರ ವಿತರಿಸಿಲ್ಲ. ತನ್ನ ಭರವಸೆಯ ಬಗ್ಗೆ ಲಿಖಿತವಾಗಿ ಹೇಳಿಕೆ ನೀಡಿದಲ್ಲಿ ಧರಣಿ ಕೈಬಿಡುತ್ತೇವೆ’ ಎಂದು ಪ್ರತಿಭಟನಾಕಾರರು ಹೇಳಿದರು.ವಿವಿಧ ಸಂಘಟನೆಗಳ ಮುಖಂಡರಾದ ಕೃಷ್ಣಮೂರ್ತಿ, ಗೋವಿಂದರಾಜು, ಶಿವು, ನಾಗರಾಜು ಮತ್ತಿತರರು ಇದ್ದರು.