ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್‌ 3ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ

Last Updated 27 ಮೇ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಜೂನ್‌ 3ರಂದು ನೈರುತ್ಯ ಮುಂಗಾರು ರಾಜ್ಯ ಪ್ರವೇಶಿಸಲಿದ್ದು, 5ನೇ ತಾರೀಕಿನ ವೇಳೆಗೆ ರಾಜ್ಯದ ಎಲ್ಲಾ ಭಾಗಗಳಿಗೂ ವ್ಯಾಪಿಸಲಿದೆ’ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸುಂದರ ಮಹಾದೇವ ಮೇತ್ರಿ, ‘ಕೇರಳಕ್ಕೆ ಮೇ 30ರಂದು ಮುಂಗಾರು ಪ್ರವೇಶಿಸಲಿದ್ದು, ನಂತರ ದಕ್ಷಿಣ ಒಳನಾಡು ಭಾಗದ ಎಲ್ಲ ಕಡೆ ಮತ್ತು ಕರಾವಳಿ ಭಾಗಗಳ ಮೂಲಕ ರಾಜ್ಯಕ್ಕೆ ಅಪ್ಪಳಿಸಲಿದೆ’ ಎಂದು ತಿಳಿಸಿದರು.

ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ. ಶ್ರೀನಿವಾಸ ರೆಡ್ಡಿ, ‘ಇಲ್ಲಿಯವರೆಗಿನ ವಾತಾವರಣ ನೋಡಿದರೆ ಈ ಬಾರಿಯ ಮುಂಗಾರು ಪ್ರಬಲವಾಗಿರಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT