‘ಮನದ ಮಾತು’ ತಿಂಗಳ ರೇಡಿಯೊ ಕಾರ್ಯಕ್ರಮದ 32ನೇ ಕಂತಿನಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ರಂಜಾನ್ ಆರಂಭದ ಈ ಶುಭ ಸಂದರ್ಭದಲ್ಲಿ ಜಗತ್ತಿನ ಎಲ್ಲರಿಗೂ ಶುಭಾಶಯಗಳು. ದೇಶದ ಮುಸ್ಲಿಂ ಸಹೋದರ ಸಹೋದರಿಯರಿಗೆ ನನ್ನ ಶುಭಾಶಯಗಳು. ಭಾರತವು ಧಾರ್ಮಿಕ ವೈವಿಧ್ಯತೆಯುಳ್ಳ ದೇಶ. ವೈವಿಧ್ಯತೆ ಎಂಬುದು ನಮ್ಮ ಶಕ್ತಿ. ಎಲ್ಲ ಧರ್ಮಗಳ ಮತ್ತು ನಂಬಿಕೆಗಳ ಜನರು ಇಲ್ಲಿ ಜತೆಯಾಗಿ ಶಾಂತಿಯಿಂದ ಜೀವನ ನಡೆಸುತ್ತಿರುವುದು ನಮಗೆ ಹೆಮ್ಮೆಯ ವಿಚಾರ’ ಎಂದು ಹೇಳಿದರು.