ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿಯಲ್ಲಿ ಮುಂದುವರಿದ ಕಾರ್ಯಾಚರಣೆ: ಒಬ್ಬ ನುಸುಳುಕೋರನ ಹತ್ಯೆ

Last Updated 28 ಮೇ 2017, 7:26 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಕೃಷ್ಣಘಾಟಿ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ ಒಬ್ಬ ನುಸುಳುಕೋರನನ್ನು ಶನಿವಾರ ತಡರಾತ್ರಿ 2.30ರ ವೇಳೆಗೆ ಹತ್ಯೆ ಮಾಡಲಾಗಿದೆ ಎಂದು ಸೇನೆ ತಿಳಿಸಿದೆ.

ಗಡಿಯಲ್ಲಿ ಉಗ್ರರ ಒಳನುಸುಳುವಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮುಂದುವರಿಸಲಾಗಿದೆ. ಕಳೆದ ವರ್ಷ ಹತ್ಯೆಯಾಗಿದ್ದ ಉಗ್ರ ಬುರ್ಹಾನ್ ವಾನಿಯ ಉತ್ತರಾಧಿಕಾರಿ ಸಬ್ಸಾರ್ ಅಹ್ಮದ್ ಭಟ್ ಸೇರಿದಂತೆ ಹಲವು ಉಗ್ರರನ್ನು ಭದ್ರತಾಪಡೆಗಳು ಶನಿವಾರ ಹತ್ಯೆ ಮಾಡಿದ್ದವು.

‘ಕಳೆದ 24 ಗಂಟೆಗಳಲ್ಲಿ ಭಾರಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಒಟ್ಟು 10 ಉಗ್ರರನ್ನು ಹತ್ಯೆ ಮಾಡಲಾಗಿದೆ. ಒಳನುಸುಳುವಿಕೆ ತಡೆ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಸೇನೆಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT