‘ಪ್ರಜಾವಾಣಿ’ ಜತೆ ಮಾತನಾಡಿದ ಶಾಸಕ ಎನ್.ಕೇಶವಮೂರ್ತಿ, ‘ಶನಿವಾರ ಮತ್ತು ಭಾನುವಾರ ಬ್ಯಾಂಕುಗಳಿಗೆ ರಜೆಯಿದ್ದ ಕಾರಣ ಪರಿಹಾರ ವಿತರಿಸಲು ಸಾಧ್ಯವಾಗಿಲ್ಲ. ಸೋಮವಾರ ವಿತರಿಸಲಾ ಗುವುದು. ಸಂತ್ರಸ್ತರಿಗೆ ಆಶ್ರಯ ಯೋಜನೆಯಡಿ ಶೀಘ್ರವಾಗಿ ಮನೆ ನಿರ್ಮಿಸಿಕೊಡುವಂತೆ ತಾಲ್ಲೂಕು ಪಂಚಾಯಿತಿ ಇಒ ಅವರಿಗೆ ಸೂಚನೆ ನೀಡಲಾಗಿದೆ’ ಎಂದರು.