ಜಾಗೃತಿ ಅಭಿಯಾನ: ಶುಚಿತ್ವಕ್ಕೆ ಸಂಬಂಧಿಸಿದಂತೆ -ನಗರಸಭೆಯಿಂದ ಮಾಹಿತಿ, ಶಿಕ್ಷಣ, ಸಹಭಾಗಿತ್ವ ಕಾರ್ಯಕ್ರಮದ ಅಡಿ ನಗರದ 23 ವಾರ್ಡ್ಗಳಲ್ಲಿ ಹಸಿ ಕಸ ಮತ್ತು ಒಣ ಕಸ ಬೇರ್ಪಡಿಸುವುದು, ಮನೆಗೊಂದು ಶೌಚಾಲಯ ನಿರ್ಮಾಣ, ನಗರದಲ್ಲಿ ಶುಚಿತ್ವ ಕಾಪಾಡುವುದು ಮತ್ತಿತರ ಅರಿವು ಮೂಡಿಸುವ ಬೀದಿನಾಟಕ ವಿಶೇಷ ಅಭಿಯಾನ ನಡೆಯುತ್ತಿದೆ. ಬೀದಿನಾಟಕ ಕಲಾ ತಂಡಗಳೊಂದಿಗೆ ದಿನಕ್ಕೆ ನಾಲ್ಕು ವಾರ್ಡ್ಗಳಂತೆ ಬೀದಿ ನಾಟಕಗಳನ್ನು ಕಲಾವಿದರು ಪ್ರದರ್ಶಿಸುತ್ತಿದ್ದು, ಜಾಗೃತಿ ಮೂಡಿಸಲಾಗುತ್ತಿದೆ.
ಬಿ.ವಿಕಾಸ್