ಬೆಂಗಳೂರು: ಹತ್ಯೆಯ (ಮಾಂಸಕ್ಕಾಗಿ) ಉದ್ದೇಶಕ್ಕೆ ಪ್ರಾಣಿಗಳ ಮಾರುಕಟ್ಟೆಗಳಲ್ಲಿ ಜಾನುವಾರುಗಳ ಮಾರಾಟ ಮತ್ತು ಖರೀದಿಗೆ ನಿರ್ಬಂಧ ವಿಧಿಸಿ ಹೊರಡಿಸಿರುವ ಹೊಸ ನಿಯಮಗಳಿಗೆ ವಿರೋಧ ವ್ಯಕ್ತಪಡಿಸಿ ಕೇರಳ ಮತ್ತು ತಮಿಳುನಾಡಿನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಇದೇ ವಿಷಯವಾಗಿ ಬೆಂಗಳೂರಿನಲ್ಲಿ ‘ಬೀಫ್ ಫೆಸ್ಟ್’ ನಡೆಸುವ ಬಗ್ಗೆ ಸುದ್ದಿ ಹರಡಿದ್ದು, ಇದಕ್ಕೆ ಅವಕಾಶ ನೀಡಿಲ್ಲ ಎಂದು ಪೊಲೀಸರು ಸೋಮವಾರ ಸ್ಪಷ್ಟಪಡಿಸಿದ್ದಾರೆ.