ಇದೇ ವೇಳೆ ತಾವು ಐಎಎಸ್ ಪದವಿಗೇರುವವರೆಗೆ ಶಿಕ್ಷಣದಲ್ಲಿ ಅನುಸರಿಸಿದ ಮಾರ್ಗ ಹಾಗೂ ಪೂರ್ವ ತಯಾರಿಗಳ ಬಗ್ಗೆ ಜಿಲ್ಲಾಧಿಕಾರಿ ಅನುಭವ ಹಂಚಿಕೊಂಡರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎನ್.ಆರ್. ಪುರುಷೋತ್ತಮ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಯದೇವಯ್ಯ, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುರೇಶ್ ಇದ್ದರು. ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ, ಪಂಗಡದ ವಾಣಿಜ್ಯ, ಕಲಾ, ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಿಗೆ ಎನ್.ಸಿ.ಆರ್.ಟಿ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.