ಎಂ.ದಾಸಾಪುರ ಗ್ರಾಮದ ಬಳಿ ವಿದ್ಯುತ್ ವಿತರಣಾ ಕೇಂದ್ರ ಆರಂಭಿಸಲಾಗುವುದು ಎಂದ ಅವರು, ಕಳೆದ ತಿಂಗಳು ಬಿದ್ದ ಮಳೆಯಿಂದಾಗಿ ತಾಲ್ಲೂಕಿನ ಕಸಬಾ, ಶ್ರವಣಬೆಳಗೊಳ ಹಾಗೂ ಉದಯಪುರ ಹೋಬಳಿಯ ಹಲವು ಕಡೆ 120 ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದವು. ಆ ಜಾಗದಲ್ಲಿ ಹೊಸ ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು. ಕಾರ್ಯಪಾಲಕ ಎಂಜಿನಿಯರ್ ಆರ್.ರಾಮಸ್ವಾಮಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಯಪ್ಪ, ಅಧಿಕಾರಿ ಕೇಶವಮೂರ್ತಿ ಇದ್ದರು.