ಈ ಎಲ್ಲ ಚರ್ಚೆಗಳು ನಡೆಯುವಾಗ ಮುಖ್ಯಮಂತ್ರಿ ಮಾತ್ರ ಸಚಿವರಾದ ಟಿ.ಬಿ.ಜಯಚಂದ್ರ, ಕೆ.ಜೆ.ಜಾರ್ಜ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಶಾಸಕ ಗೋವಿಂದರಾಜು ಅವರ ಜೊತೆ ಜನಾರ್ದನ ಹೋಟೆಲ್ನಲ್ಲಿ ಮಸಾಲೆ ದೋಸೆ ಮೆಲ್ಲುತ್ತಿದ್ದರಂತೆ. ಅವರು ಮೆಟ್ರೊ ಕಾಮಗಾರಿ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಲು ಏಕೆ ನಿರಾಕರಿಸಿದರು ಎಂಬ ಪ್ರಶ್ನೆಗೆ ಮಾತ್ರ ಉತ್ತರ ಸಿಗಲಿಲ್ಲ!