<p><strong>ಬೆಂಗಳೂರು: </strong>ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ನಾಡಿನ ವಿವಿಧೆಡೆ ಬುಧವಾರ ಯೋಗಾಸನ ಪ್ರದರ್ಶನ ಕಾರ್ಯಕ್ರಮಗಳು ನಡೆದವು.</p>.<p>ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಭಾಗವಹಿಸಿದ್ದರು.</p>.<p>‘ಎಂಬತ್ತು ವರ್ಷದಲ್ಲೂ ನನ್ನ ಹೋರಾಟದ ಉತ್ಸಾಹ ಕಡಿಮೆ ಆಗಿಲ್ಲ. ಇದಕ್ಕೆ ಯೋಗಾಭ್ಯಾಸವೇ ಕಾರಣ. ಯೋಗ ಶಿಕ್ಷಣವನ್ನು ಪಠ್ಯಕ್ರಮದಲ್ಲಿ ಅಳವಡಿಸಬೇಕು’ ಎಂದು ಅಣ್ಣಾ ಹಜಾರೆ ಒತ್ತಾಯಿಸಿದರು.</p>.<p>‘ಯೋಗ ಯಾವುದೇ ಧರ್ಮ ಅಥವಾ ಜಾತಿಗೆ ಸೀಮಿತ ಅಲ್ಲ. ಯಾರೂ ಅದನ್ನು ಜಹಗೀರ್ ಮಾಡಿಕೊಳ್ಳಬಾರದು’ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಹೇಳಿದರು.</p>.<p><strong>ಧಾರವಾಡ</strong>ದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಯೋಗಾಭ್ಯಾಸ ಹಾಗೂ ಯೋಗ ಪ್ರಾತ್ಯಕ್ಷಿಕೆ ನಡೆಯಿತು. 900ಕ್ಕೂ ಹೆಚ್ಚು ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕರ್ನಾಟಕ ವಿಶ್ವವಿದ್ಯಾಲಯ, ತಪೋವನ ಸೇರಿದಂತೆ ಹಲವೆಡೆ ಯೋಗ ದಿನ ಆಚರಿಸಲಾಯಿತು.</p>.<p><strong>ದಾವಣಗೆರೆ</strong>ಯ ಮೋತಿ ವೀರಪ್ಪ ಹೈಸ್ಕೂಲ್ ಮೈದಾನದಲ್ಲಿ ಸಂತೋಷ್ ಗುರೂಜಿ ಅವರಿಂದ ಯೋಗದ ಬಗ್ಗೆ ಉಪನ್ಯಾಸ ನಡೆಯಿತು. ನಂತರ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ನೇತೃತ್ವದಲ್ಲಿ ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು.</p>.<p><strong>ಕಾರವಾರ</strong>ದ ದೈವಜ್ಞ ಭವನದಲ್ಲಿ ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಆಯೋಜಿಸಿದ್ದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ಮಾಡಿದರು.</p>.<p><strong>ಶಿರಸಿ</strong>ಯ ಟಿಎಸ್ಎಸ್ ಸೇಲ್ ಯಾರ್ಡ್ನಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ 500ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.</p>.<p><strong>ಚಿತ್ರದುರ್ಗ</strong>ದ ಹಳೆಯ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಯೋಗ ದಿನಾಚರಣೆ ನಡೆಯಿತು.</p>.<p><strong>ಬಳ್ಳಾರಿ</strong>ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತಿ ಹಂಗಾಮಿ ಅಧ್ಯಕ್ಷೆ ಪಿ. ದೀನಾ, ಜಿಲ್ಲಾಧಿಕಾರಿ ರಾಮಪ್ರಸಾದ್ ಮನೋಹರ್ ನೇತೃತ್ವದಲ್ಲಿ ಯೋಗ ದಿನದ ಕಾರ್ಯಕ್ರಮ ನಡೆಯಿತು.</p>.<p><strong>ರಾಮನಗರ</strong>ದಲ್ಲಿ ಜಿಲ್ಲಾಡಳಿತ ಮತ್ತು ಪತಂಜಲಿ ಯೋಗ ಸಮಿತಿ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು.</p>.<p><strong>ಮೈಸೂರು</strong> ನಗರದ ಚಾಮುಂಡಿ ಬೆಟ್ಟದ ತಪ್ಪಲಿನ ರೇಸ್ ಕೋರ್ಸ್ನಲ್ಲಿ ಗಿನ್ನಿಸ್ ದಾಖಲೆಗಾಗಿ 60 ಸಾವಿರ ಜನರಿಂದ ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು.<br /> <br /> </p>.<p><br /> <em><strong>ಮೈಸೂರಿನಲ್ಲಿ ನಡೆದ ಸಾಮೂಹಿಕ ಯೋಗ ಪ್ರದರ್ಶನ</strong></em></p>.<p><strong>ಕಲಬುರ್ಗಿ</strong>ಯ ಡಿಎಆರ್ ಮೈದಾನದಲ್ಲಿ ಆಯುಷ್ ಇಲಾಖೆಯು ಆಯೋಜಿಸಿರುವ ಯೋಗ ದಿನಾಚರಣೆಯಲ್ಲಿ ಸರ್ಕಾರಿ ನೌಕರರು, ಸಾರ್ವಜನಿಕರು ಭಾಗವಹಿಸಿದ್ದರು.<br /> ನಗರದ ಶಾಲಾ-ಕಾಲೇಜು, ಜಿಲ್ಲಾ ವಿಜ್ಞಾನ ಕೇಂದ್ರ ಸೇರಿದಂತೆ ಹಲವೆಡೆ ಯೋಗ ದಿನವನ್ನು ಆಚರಿಸಲಾಯಿತು.</p>.<p><strong>ಬೆಳಗಾವಿ</strong>ಯ ಗಾಂಧಿ ಭವನದಲ್ಲಿ ನಡೆದ ನಡೆದ ಯೋಗ ಕಾರ್ಯಕ್ರಮದಲ್ಲಿ ಹಲವರು ಭಾಗವಹಿಸಿದ್ದರು.</p>.<p><strong>ಯಾದಗಿರಿ</strong>ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಯೋಗಾಸನ ಪ್ರದರ್ಶಿಸಿದರು.</p>.<p><strong>ಬಾಗಲಕೋಟೆ</strong>ಯ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ಕಾರ್ಯಕ್ರಮ ನಡೆಯಿತು.</p>.<p><strong>ಚಿಕ್ಕಮಗಳೂರು</strong> ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಯೋಗಾಭ್ಯಾಸ ನಡೆಯಿತು.</p>.<p><strong>ಹೊಸಪೇಟೆ</strong> ಸಮೀಪದ ಹಂಪಿಯಲ್ಲಿ ಯೋಗ ದಿನ ಆಚರಿಸಲಾಯಿತು.<br /> <br /> <strong>ತುಮಕೂರು</strong> ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂಸದ ಎಸ್.ಪಿ. ಮುದ್ದಹನುಮೇಗೌಡ, ಜಿಲ್ಲಾಧಿಕಾರಿ ಕೆ.ಪಿ. ಮೋಹನ್ರಾಜ್, ಎನ್ಸಿಸಿ ಗ್ರೂಪ್ ಕಮಾಂಡರ್ ಕರ್ನಲ್ ಎಸ್.ಎಂ. ಚಂದ್ರಶೇಖರ್ ಅವರು ಯೋಗಾಸನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ನಾಡಿನ ವಿವಿಧೆಡೆ ಬುಧವಾರ ಯೋಗಾಸನ ಪ್ರದರ್ಶನ ಕಾರ್ಯಕ್ರಮಗಳು ನಡೆದವು.</p>.<p>ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಭಾಗವಹಿಸಿದ್ದರು.</p>.<p>‘ಎಂಬತ್ತು ವರ್ಷದಲ್ಲೂ ನನ್ನ ಹೋರಾಟದ ಉತ್ಸಾಹ ಕಡಿಮೆ ಆಗಿಲ್ಲ. ಇದಕ್ಕೆ ಯೋಗಾಭ್ಯಾಸವೇ ಕಾರಣ. ಯೋಗ ಶಿಕ್ಷಣವನ್ನು ಪಠ್ಯಕ್ರಮದಲ್ಲಿ ಅಳವಡಿಸಬೇಕು’ ಎಂದು ಅಣ್ಣಾ ಹಜಾರೆ ಒತ್ತಾಯಿಸಿದರು.</p>.<p>‘ಯೋಗ ಯಾವುದೇ ಧರ್ಮ ಅಥವಾ ಜಾತಿಗೆ ಸೀಮಿತ ಅಲ್ಲ. ಯಾರೂ ಅದನ್ನು ಜಹಗೀರ್ ಮಾಡಿಕೊಳ್ಳಬಾರದು’ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಹೇಳಿದರು.</p>.<p><strong>ಧಾರವಾಡ</strong>ದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಯೋಗಾಭ್ಯಾಸ ಹಾಗೂ ಯೋಗ ಪ್ರಾತ್ಯಕ್ಷಿಕೆ ನಡೆಯಿತು. 900ಕ್ಕೂ ಹೆಚ್ಚು ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕರ್ನಾಟಕ ವಿಶ್ವವಿದ್ಯಾಲಯ, ತಪೋವನ ಸೇರಿದಂತೆ ಹಲವೆಡೆ ಯೋಗ ದಿನ ಆಚರಿಸಲಾಯಿತು.</p>.<p><strong>ದಾವಣಗೆರೆ</strong>ಯ ಮೋತಿ ವೀರಪ್ಪ ಹೈಸ್ಕೂಲ್ ಮೈದಾನದಲ್ಲಿ ಸಂತೋಷ್ ಗುರೂಜಿ ಅವರಿಂದ ಯೋಗದ ಬಗ್ಗೆ ಉಪನ್ಯಾಸ ನಡೆಯಿತು. ನಂತರ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ನೇತೃತ್ವದಲ್ಲಿ ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು.</p>.<p><strong>ಕಾರವಾರ</strong>ದ ದೈವಜ್ಞ ಭವನದಲ್ಲಿ ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಆಯೋಜಿಸಿದ್ದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ಮಾಡಿದರು.</p>.<p><strong>ಶಿರಸಿ</strong>ಯ ಟಿಎಸ್ಎಸ್ ಸೇಲ್ ಯಾರ್ಡ್ನಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ 500ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.</p>.<p><strong>ಚಿತ್ರದುರ್ಗ</strong>ದ ಹಳೆಯ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಯೋಗ ದಿನಾಚರಣೆ ನಡೆಯಿತು.</p>.<p><strong>ಬಳ್ಳಾರಿ</strong>ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತಿ ಹಂಗಾಮಿ ಅಧ್ಯಕ್ಷೆ ಪಿ. ದೀನಾ, ಜಿಲ್ಲಾಧಿಕಾರಿ ರಾಮಪ್ರಸಾದ್ ಮನೋಹರ್ ನೇತೃತ್ವದಲ್ಲಿ ಯೋಗ ದಿನದ ಕಾರ್ಯಕ್ರಮ ನಡೆಯಿತು.</p>.<p><strong>ರಾಮನಗರ</strong>ದಲ್ಲಿ ಜಿಲ್ಲಾಡಳಿತ ಮತ್ತು ಪತಂಜಲಿ ಯೋಗ ಸಮಿತಿ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು.</p>.<p><strong>ಮೈಸೂರು</strong> ನಗರದ ಚಾಮುಂಡಿ ಬೆಟ್ಟದ ತಪ್ಪಲಿನ ರೇಸ್ ಕೋರ್ಸ್ನಲ್ಲಿ ಗಿನ್ನಿಸ್ ದಾಖಲೆಗಾಗಿ 60 ಸಾವಿರ ಜನರಿಂದ ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು.<br /> <br /> </p>.<p><br /> <em><strong>ಮೈಸೂರಿನಲ್ಲಿ ನಡೆದ ಸಾಮೂಹಿಕ ಯೋಗ ಪ್ರದರ್ಶನ</strong></em></p>.<p><strong>ಕಲಬುರ್ಗಿ</strong>ಯ ಡಿಎಆರ್ ಮೈದಾನದಲ್ಲಿ ಆಯುಷ್ ಇಲಾಖೆಯು ಆಯೋಜಿಸಿರುವ ಯೋಗ ದಿನಾಚರಣೆಯಲ್ಲಿ ಸರ್ಕಾರಿ ನೌಕರರು, ಸಾರ್ವಜನಿಕರು ಭಾಗವಹಿಸಿದ್ದರು.<br /> ನಗರದ ಶಾಲಾ-ಕಾಲೇಜು, ಜಿಲ್ಲಾ ವಿಜ್ಞಾನ ಕೇಂದ್ರ ಸೇರಿದಂತೆ ಹಲವೆಡೆ ಯೋಗ ದಿನವನ್ನು ಆಚರಿಸಲಾಯಿತು.</p>.<p><strong>ಬೆಳಗಾವಿ</strong>ಯ ಗಾಂಧಿ ಭವನದಲ್ಲಿ ನಡೆದ ನಡೆದ ಯೋಗ ಕಾರ್ಯಕ್ರಮದಲ್ಲಿ ಹಲವರು ಭಾಗವಹಿಸಿದ್ದರು.</p>.<p><strong>ಯಾದಗಿರಿ</strong>ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಯೋಗಾಸನ ಪ್ರದರ್ಶಿಸಿದರು.</p>.<p><strong>ಬಾಗಲಕೋಟೆ</strong>ಯ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ಕಾರ್ಯಕ್ರಮ ನಡೆಯಿತು.</p>.<p><strong>ಚಿಕ್ಕಮಗಳೂರು</strong> ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಯೋಗಾಭ್ಯಾಸ ನಡೆಯಿತು.</p>.<p><strong>ಹೊಸಪೇಟೆ</strong> ಸಮೀಪದ ಹಂಪಿಯಲ್ಲಿ ಯೋಗ ದಿನ ಆಚರಿಸಲಾಯಿತು.<br /> <br /> <strong>ತುಮಕೂರು</strong> ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂಸದ ಎಸ್.ಪಿ. ಮುದ್ದಹನುಮೇಗೌಡ, ಜಿಲ್ಲಾಧಿಕಾರಿ ಕೆ.ಪಿ. ಮೋಹನ್ರಾಜ್, ಎನ್ಸಿಸಿ ಗ್ರೂಪ್ ಕಮಾಂಡರ್ ಕರ್ನಲ್ ಎಸ್.ಎಂ. ಚಂದ್ರಶೇಖರ್ ಅವರು ಯೋಗಾಸನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>