‘ತಂಬಾಕು ಮಾರಾಟದಿಂದ ಉತ್ತಮ ಆದಾಯ ಹೊಂದುತ್ತಿರುವ ಮಂಡಳಿಯಾಗಲಿ, ಅಧಿಕಾರಿಗಳಾಗಲಿ ಬೆಳೆ ತಾಕುಗಳಿಗೆ ಭೇಟಿ ನೀಡಿ ಹುಳುಗಳ ನಿಯಂತ್ರಣಕ್ಕೆ ಅಗತ್ಯವಿರುವ ಔಷಧಿಗಳನ್ನು ನೀಡುತ್ತಿಲ್ಲ. ನೆಪ ಮಾತ್ರಕ್ಕೆ ಉಚಿತ ಸಲಹೆ ನೀಡುವ ಮಂಡಳಿಯವರು, ರೈತರ ಕಷ್ಟ ಆಲಿಸುತ್ತಿಲ್ಲ’ ಎಂದು ಬೆಳೆಗಾರರು ಅಸಮಾಧಾನ ವ್ಯಕ್ತಪಡಿಸುತ್ತಾರೆ.