ಲಂಡನ್ನಲ್ಲಿ ಜೂನ್ 18ರಂದು ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಭಾರತ ತಂಡ ಫೈನಲ್ನಲ್ಲಿ ಸೋತಿತ್ತು. 20ರಂದು ವೆಸ್ಟ್ ಇಂಡೀಸ್ಗೆ ಪ್ರಯಾಣಿ
ಸಿತ್ತು. ಅದೇ ಸಂದರ್ಭದಲ್ಲಿ ತಂಡದ ಮುಖ್ಯ ಕೋಚ್ ಅನಿಲ್ ಕುಂಬ್ಳೆ ರಾಜೀನಾಮೆ ನೀಡಿದ್ದರು. ಆದ್ದರಿಂದ ಅವರು ತಂಡದೊಂದಿಗೆ ಪ್ರಯಾಣಿಸಲಿಲ್ಲ.
ಕುಂಬ್ಳೆ ಅವರು ತಾವು ರಾಜೀನಾಮೆ ನೀಡಲು ಕೊಹ್ಲಿ ಅವರ ಭಿನ್ನಾಭಿಪ್ರಾಯವೇ ಕಾರಣವೆಂದು ಟ್ವೀಟ್ ಮಾಡಿರುವುದು ಈಗ ಜಗಜ್ಜಾಹೀರಾಗಿದೆ. ಅದರ ಕುರಿತು ವಿರಾಟ್ ಕೊಹ್ಲಿ ಅವರು ಇಲ್ಲಿ ಪ್ರತಿಕ್ರಿಯಿಸುವ ನಿರೀಕ್ಷೆ ಇದೆ.