ರಾಜ್ಯಶಾಸ್ತ್ರ ವಿಷಯದಲ್ಲಿ ಸಂಶೋಧನೆ ಕೈಗೊಳ್ಳಲು ಕೆಲವು ತಿಂಗಳ ಹಿಂದೆ ಈ ವಿದ್ಯಾರ್ಥಿಗಳು ಆಯ್ಕೆಯಾಗಿದ್ದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎ.ಷಣ್ಮುಖ, ಪ್ರೊ.ಜಾವೇದ್, ಕೆ.ಚಂದ್ರಶೇಖರ್, ಸಹ್ಯಾದ್ರಿ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಪ್ರಹ್ಲಾದಪ್ಪ, ಡಾ.ಪ್ರಸನ್ನಕುಮಾರ್, ಪ್ರೊ.ಎಂ.ಬಿ.ಮಹಾವರ್ಕರ್ ಅವರನ್ನು ಈ ಸಂಶೋಧನಾರ್ಥಿಗಳಿಗೆ ಮಾರ್ಗದರ್ಶನ ಮಾಡಲು ವಿಶ್ವವಿದ್ಯಾಲಯ ನಿಯೋಜನೆ ಮಾಡಿತ್ತು.