ಕೊಣನೂರು (ಹಾಸನ ಜಿಲ್ಲೆ): ಬರಗಾಲಕ್ಕೆ ತುತ್ತಾಗಿ ಅನ್ನದಾತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂಕಷ್ಟದ ಸ್ಥಿತಿಯಲ್ಲಿಯೂ ಕಾವೇರಿ ನದಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಹೇಳುತ್ತ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸಾರ್ವಜನಿಕ ಸಭೆಯಲ್ಲಿ ಕಣ್ಣೀರು ಹಾಕಿದರು.
ಹೋಬಳಿಯ ಕಟ್ಟೇಪುರ ಗ್ರಾಮದಲ್ಲಿ ಗುರುವಾರ ಸಂಸದರ ಆದರ್ಶ ಗ್ರಾಮ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಕಾವೇರಿ ನದಿ ನೀರು ಹಂಚಿಕೆ ವಿಚಾರ ಪ್ರಸ್ತಾಪಿಸಿ ಗದ್ಗದಿತರಾದರು.
ಇನ್ನೂ 3 ತಿಂಗಳಲ್ಲಿ ಕಾವೇರಿ ನೀರು ಹಂಚಿಕೆ ವಿಚಾರ ತೀರ್ಮಾನ ಆಗಲಿದೆ. ಸದ್ಯಕ್ಕೆ ಅಲ್ಲಿನ ಬೆಳವಣಿಗೆ ಗಮನಿಸಿದರೆ ರಾಜ್ಯಕ್ಕೆ ನ್ಯಾಯ ಸಿಗುವ ಅನುಮಾನವಿದೆ ಎಂದರು.