ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಲ್ಮಾನ್ ಖುರ್ಷಿದ್, ಇಬ್ಬರ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಮೇ 25ರಂದು ತಿರಸ್ಕರಿಸಿದ್ದಾರೆ. ಯಾವುದೇ ಸಮಯದಲ್ಲಿ ಅವರ ವಿರುದ್ಧ ಶಿಕ್ಷೆ ಜಾರಿಗೆ ವಾರಂಟ್ ಜಾರಿಯಾಗಬಹುದು. ಹಾಗಾಗಿ, ಈ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಹೇಳಿದರು.