ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡಿನ ಚಕಮಕಿ: ಎಸ್‌ಟಿಎಫ್‌ನ ಸಿಬ್ಬಂದಿಗೆ ಗಾಯ

Last Updated 24 ಜೂನ್ 2017, 19:39 IST
ಅಕ್ಷರ ಗಾತ್ರ

ರಾಯಪುರ : ಛತ್ತೀಸಗಡದ ಸುಕ್ಮಾ ಜಿಲ್ಲೆಯ ದಟ್ಟ ಅರಣ್ಯದಲ್ಲಿ ನಕ್ಸಲರೊಂದಿಗೆ  ನಡೆದ ಗುಂಡಿನ ಚಕಮಕಿಯಲ್ಲಿ ವಿಶೇಷ ಕಾರ್ಯಪಡೆಯ (ಎಸ್‌ಟಿಎಫ್‌) ಐವರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ದಾಂತೇವಾಡ ವಲಯದ ಉಪ ಪೊಲೀಸ್‌ ಮಹಾ ನಿರ್ದೇಶಕ ಸುಂದರ್ ರಾಜ್‌ ಹೇಳಿದ್ದಾರೆ.
ಚಿಂತಗುಫಾ ಪೊಲೀಸ್‌ ಠಾಣೆ ಪ್ರದೇಶದಲ್ಲಿ ಎಸ್‌ಟಿಎಫ್‌ನ ಜಂಟಿ ಪಡೆ ನಡೆಸುತ್ತಿರುವ ನಕ್ಸಲ್‌ ನಿಗ್ರಹ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು  ಅವರು ತಿಳಿಸಿದ್ದಾರೆ.

ಜಿಲ್ಲಾ ಮೀಸಲು ಪೊಲೀಸ್‌ ಪಡೆ (ಡಿಆರ್‌ಜಿ) ಹಾಗೂ ಕೋಬ್ರಾದ (ಕಮ್ಯಾಂಡೊ ಬೆಟಾಲಿಯನ್‌
ಫಾರ್‌ ರೆಸಲ್ಯೂಟ್‌ ಆ್ಯಕ್ಷನ್‌) ಸಿಬ್ಬಂದಿ    ಈ ಕಾರ್ಯಾಚರಣೆಯಲ್ಲಿದ್ದಾರೆ ಎಂದು ಕೂಡ ಅವರು ಸುಂದರ್ ರಾಜ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT