ಹೊಸಕೋಟೆ: ‘ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಲು ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ –2017 ಜಾರಿಗೆ ತರಲು ಉದ್ದೇಶಿಸಿದ್ದು, ಇದು ಬಹಳಷ್ಟು ವೈದ್ಯರಿಗೆ ಮಾರಕವಾಗಲಿದೆ’ ಎಂದು ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದರು. ವಿವಾ ಹೆಲ್ತ್ ಕೇರ್ ತರಬೇತಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.