ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ‘ಅಶ್ರಫ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೆಲವು ದಿನಗಳ ಹಿಂದೆ ಪ್ರಭಾಕರ ಭಟ್ ಜೊತೆ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ. ಅದು ಕಲ್ಲಡ್ಕ ಗಲಭೆಗೆ ಸಂಬಂಧಿಸಿದ ಗೋಷ್ಠಿ. ಆ ಬಳಿಕ ಅಶ್ರಫ್ ಕೊಲೆ ನಡೆದಿದೆ. ಇದು ಸಂಶಯವನ್ನು ಮತ್ತಷ್ಟು ಬಲಗೊಳಿಸಿದೆ’ ಎಂದರು.