ರಾಮನಗರ: ಕನಕಪುರ ತಾಲ್ಲೂಕು ಹಾರೋಹಳ್ಳಿ ಹೋಬಳಿಯ ಕಣಿವೆ ಮಾದಾಪುರ ಗ್ರಾಮದ ತಟ್ಟೆ ಕೆರೆಯಲ್ಲಿ ಭಾನುವಾರ ಬೆಳಿಗ್ಗೆ ನಾಯಿ ತೊಳೆಯುತ್ತಿದ್ದ ಮಧು (26) ಎಂಬುವರ ಮೇಲೆ ಮೊಸಳೆ ದಾಳಿ ನಡೆಸಿದೆ. ಮೊಸಳೆ ದಾಳಿಯಿಂದ ಮಧು ಅವರ ಎಡಗೈ ತುಂಡಾಗಿದೆ.
ತೀವ್ರ ರಕ್ತಸ್ರಾವಗೊಂಡ ಮಧು ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.