ಹಾಸನ: ‘ರೈತರ ಸಾಲ ಮನ್ನಾಕ್ಕೆ ಷರತ್ತು ವಿಧಿಸಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಹಾಸನದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾಲ ಮನ್ನಾದಿಂದ ರೈತರ ಎಲ್ಲಾ ಸಮಸ್ಯೆ ಬಗೆಹರಿಯುವುದಿಲ್ಲ. ಇದನ್ನು ಸದನದಲ್ಲೂ ಹೇಳಿದ್ದೇನೆ’ ಎಂದರು.
‘ಅವಧಿ ಪೂರ್ವ ಚುನಾವಣೆ ಇಲ್ಲ. ಈ ವಿಷಯದ ಬಗ್ಗೆ ಬಿಜೆಪಿಯವರು ಗೊಂದಲ ಸೃಷ್ಟಿಸುತ್ತಿದ್ದಾರೆ. ಮುಂದಿನ ವರ್ಷ ಮೇನಲ್ಲಿ ಚುನಾವಣೆ ನಡೆಯಲಿದೆ. ವಿಶ್ವನಾಥ್ ನಮ್ಮ ಪಕ್ಷ ಬಿಟ್ಟಿದ್ದಾರೆ. ಅವರ ಬಗ್ಗೆ ಮಾತನಾಡುವುದಿಲ್ಲ’ ಎಂದು ಹೇಳಿದರು.