<p><strong>ನವದೆಹಲಿ:</strong> ಜುಲೈ 17ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎಯ ಅಭ್ಯರ್ಥಿ ರಾಮನಾಥ ಕೋವಿಂದ್ ಶೇ 62ರಷ್ಟು ಮತಗಳನ್ನು ಪಡೆದು, ಗೆಲುವು ಸಾಧಿಸುವುದು ನಿಚ್ಚಳವಾಗಿದೆ.</p>.<p>ಯುಪಿಎ ಮತ್ತು ಇತರ ವಿರೋಧ ಪಕ್ಷಗಳ ಅಭ್ಯರ್ಥಿ ಮೀರಾ ಕುಮಾರ್ ಅವರು ಶೇ 34ರಷ್ಟು ಮತಗಳನ್ನು ಪಡೆಯುವ ಸಾಧ್ಯತೆ ಇದೆ. ಅವರು ಇದೇ 28ರಂದು ನಾಮಪತ್ರ ಸಲ್ಲಿಸಲಿದ್ದಾರೆ.</p>.<p><strong>ಮೀರಾಕುಮಾರ್ ನಾಮಪತ್ರ: ಸಿದ್ದರಾಮಯ್ಯ ದೇವೇಗೌಡ ಸಹಿ<br /> ಬೆಂಗಳೂರು:</strong> ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಸ್ಪರ್ಧಿಸುವ ಕಾಂಗ್ರೆಸ್ನ ಮೀರಾ ಕುಮಾರ್ ನಾಮಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಸೂಚಕರಾಗಿ ಸಹಿ ಹಾಕಿದರು.</p>.<p>ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಅವರಿಗೆ ರಾಜ್ಯದಲ್ಲಿನ ಮತಗಳ ಕ್ರೋಡೀಕರಣದ ಜವಾಬ್ದಾರಿಯನ್ನು ಹೈಕಮಾಂಡ್ ವಹಿಸಿದೆ. ಹಾಗಾಗಿ ಅವರು ದೇವೇಗೌಡರ ನಿವಾಸಕ್ಕೆ ತೆರಳಿ, ಸೂಚಕರಾಗಿ ಅವರ ಸಹಿ ಪಡೆದರು.</p>.<p>ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕಾರ್ಯದರ್ಶಿಗಳಾದ ಮಾಣಿಕ್ಯಂ ಠಾಗೋರ್, ಸೂರಜ್ ಹೆಗಡೆ ಅವರು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಅವರ ಸಹಿ ಪಡೆದರು.</p>.<p>ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ಅವರಿಗೆ ನಮ್ಮ ಪಕ್ಷ ಬೆಂಬಲ ನೀಡಲಿದ್ದು, ಕೆಲವು ಶಾಸಕರು ನಾಮ ಪತ್ರಕ್ಕ ಸಹಿ ಹಾಕಿದ್ದಾರೆ ಎಂದು ಕುಮಾರ ಸ್ವಾಮಿ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜುಲೈ 17ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎಯ ಅಭ್ಯರ್ಥಿ ರಾಮನಾಥ ಕೋವಿಂದ್ ಶೇ 62ರಷ್ಟು ಮತಗಳನ್ನು ಪಡೆದು, ಗೆಲುವು ಸಾಧಿಸುವುದು ನಿಚ್ಚಳವಾಗಿದೆ.</p>.<p>ಯುಪಿಎ ಮತ್ತು ಇತರ ವಿರೋಧ ಪಕ್ಷಗಳ ಅಭ್ಯರ್ಥಿ ಮೀರಾ ಕುಮಾರ್ ಅವರು ಶೇ 34ರಷ್ಟು ಮತಗಳನ್ನು ಪಡೆಯುವ ಸಾಧ್ಯತೆ ಇದೆ. ಅವರು ಇದೇ 28ರಂದು ನಾಮಪತ್ರ ಸಲ್ಲಿಸಲಿದ್ದಾರೆ.</p>.<p><strong>ಮೀರಾಕುಮಾರ್ ನಾಮಪತ್ರ: ಸಿದ್ದರಾಮಯ್ಯ ದೇವೇಗೌಡ ಸಹಿ<br /> ಬೆಂಗಳೂರು:</strong> ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಸ್ಪರ್ಧಿಸುವ ಕಾಂಗ್ರೆಸ್ನ ಮೀರಾ ಕುಮಾರ್ ನಾಮಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಸೂಚಕರಾಗಿ ಸಹಿ ಹಾಕಿದರು.</p>.<p>ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಅವರಿಗೆ ರಾಜ್ಯದಲ್ಲಿನ ಮತಗಳ ಕ್ರೋಡೀಕರಣದ ಜವಾಬ್ದಾರಿಯನ್ನು ಹೈಕಮಾಂಡ್ ವಹಿಸಿದೆ. ಹಾಗಾಗಿ ಅವರು ದೇವೇಗೌಡರ ನಿವಾಸಕ್ಕೆ ತೆರಳಿ, ಸೂಚಕರಾಗಿ ಅವರ ಸಹಿ ಪಡೆದರು.</p>.<p>ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕಾರ್ಯದರ್ಶಿಗಳಾದ ಮಾಣಿಕ್ಯಂ ಠಾಗೋರ್, ಸೂರಜ್ ಹೆಗಡೆ ಅವರು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಅವರ ಸಹಿ ಪಡೆದರು.</p>.<p>ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ಅವರಿಗೆ ನಮ್ಮ ಪಕ್ಷ ಬೆಂಬಲ ನೀಡಲಿದ್ದು, ಕೆಲವು ಶಾಸಕರು ನಾಮ ಪತ್ರಕ್ಕ ಸಹಿ ಹಾಕಿದ್ದಾರೆ ಎಂದು ಕುಮಾರ ಸ್ವಾಮಿ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>