* ನಾಗಾರ್ಜುನ ಸಾಗರ: ಎರಡನೆ ಹಂತಕ್ಕೆ ರಾಜ್ಯದ ಪ್ರತಿಭಟನೆ
ಬೆಂಗಳೂರು, ಜೂ. 28– ನಾಗಾರ್ಜುನ ಸಾಗರ ಯೋಜನೆಯ ಎರಡನೆ ಹಂತದ ಕೆಲಸ ಪ್ರಾರಂಭಿಸುವುದಕ್ಕೆ ಆಂಧ್ರ ಪ್ರದೇಶಕ್ಕೆ ಮೈಸೂರು ಮತ್ತು ಮಹಾರಾಷ್ಟ್ರಗಳಿಗೆ ತಿಳಿಸದೆ ಒಪ್ಪಿಗೆ ನೀಡುವುದಿಲ್ಲವೆಂದು ಕೇಂದ್ರ ಸರಕಾರ ಆಶ್ವಾಸನೆ ನೀಡಿದೆಯೆಂದು ಲೋಕೋಪಯೋಗಿ ಸಚಿವ ಶ್ರೀ ವೀರೇಂದ್ರ ಪಾಟೀಲರು ಇಂದು ವಿಧಾನ ಸಭೆಯಲ್ಲಿ ತಿಳಿಸಿದರು.