‘ಕೆರೆ ನೀರು ಕಲುಷಿತವಾಗದಂತೆ ನೋಡಿಕೊಳ್ಳಬೇಕು’ ಎಂದು ಗ್ರಾಮಸ್ಥರಿಗೆ ಕಿವಿಮಾತು ಹೇಳಿದರು. ಗ್ರಾಮಕ್ಕೆ ಭೇಟಿ ನೀಡಿದ ನೆನಪಿಗಾಗಿ ಕೆರೆ ದಡದಲ್ಲಿ ಅರಳಿ ಗಿಡವನ್ನು ನೆಟ್ಟರು. ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹7 ಲಕ್ಷ ಹಾಗೂ ಸ್ಥಳೀಯ ಮೂಲಗಳಿಂದ ₹8 ಲಕ್ಷ ಸೇರಿ ₹15 ಲಕ್ಷ ವೆಚ್ಚದಲ್ಲಿ 12 ಎಕರೆ 33 ಗುಂಟೆ ವಿಸ್ತೀರ್ಣದ ಕೆರೆಯ ಪುನಶ್ಚೇತನ ಕಾರ್ಯ ಮಾಡಲಾಗಿದೆ.