ಇತ್ತೀಚೆಗೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು, ‘ಹಿಂದಿ ರಾಷ್ಟ್ರಭಾಷೆಯಾಗಿದ್ದು, ದೇಶದ ಪ್ರತಿಯೊಬ್ಬರೂ ಕಲಿಯಬೇಕು’ ಎಂದು ಹೇಳಿದ್ದರು. ಇದನ್ನು ಅಲ್ಲಗಳೆದಿರುವ ಸಿದ್ದರಾಮಯ್ಯ, ‘ಹಿಂದಿಯನ್ನು ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಮಾತನಾಡಲಾಗುತ್ತದೆಯೇ ಹೊರತು ದೇಶದಾದ್ಯಂತ ಬಳಕೆಯಲ್ಲಿಲ್ಲ. ವೆಂಕಯ್ಯ ನಾಯ್ಡು ಅವರ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ’ ಎಂದಿದ್ದಾರೆ.