‘ವಾರದ ಹಿಂದೆ ಅಲ್ಪ ಪ್ರಮಾಣದಲ್ಲಿ ಮಳೆ ಬಂದಿದ್ದು ಬಿಟ್ಟರೆ ಇಲ್ಲಿ ಮತ್ತೆ ಮಳೆಯಾಗಿಲ್ಲ. ನಿತ್ಯವೂ ಹೆಚ್ಚಿನ ಪ್ರಮಾಣದಲ್ಲಿ ಗಾಳಿ ಬೀಸುತ್ತಿದೆ. ಆದರೆ ಮಹಾರಾಷ್ಟ್ರದ ಕೃಷ್ಣಾ ನದಿ ಪಾತ್ರದಲ್ಲಿ ಮಳೆಯಾಗುತ್ತಿರುವುದು ನಮಗೆ ಖುಷಿಯ ಸಂಗತಿಯಾಗಿದೆ’ ಎಂದು ರಾಜ್ಯ ರೈತ ಸಂಘದ ಮುಖಂಡರಾದ ಮಲ್ಲಿಕಾರ್ಜುನ ಸತ್ಯಂಪೇಟೆ, ಮಹಾದೇವಿ ಬೇವಿನಾಳಮಠ ಹೇಳುತ್ತಾರೆ.