ನಂತರ ನಡೆದ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಜಿಎಸ್ಟಿ ಕುರಿತ ಸಭಿಕರ ಹತ್ತಾರು ಸಂದೇಹ ಪ್ರಶ್ನೆಗಳಿಗೆ ಅಧಿಕಾರಿಗಳು ಉತ್ತರಿಸಿದರು. ವರ್ತಕರ ಸಂಘದ ಅಧ್ಯಕ್ಷ ವೆಂಕಟೇಶ ಪ್ರಭು ಸ್ವಾಗತಿಸಿದರು. ಹೊನ್ನಾವರ ವಾಣಿಜ್ಯ ತೆರಿಗೆ ಅಧಿಕಾರಿ ಮಹ್ಮದ್ ಶರೀಫ್ ಲಕ್ಷೇಶ್ವರ, ವರ್ತಕರ ಸಂಘದ ಕಾರ್ಯದರ್ಶಿ ಇಸ್ಮಾಯಿಲ್ ಸಿದ್ದಿಕ್ ಉಪಸ್ಥಿತರಿದ್ದರು. ಮಂಜುನಾಥ ಪ್ರಭು ನಿರೂಪಿಸಿದರು. ಜಿಲ್ಲೆಯ ವಿವಿಧೆಡೆಯಿಂದ 500ಕ್ಕೂ ಹೆಚ್ಚು ವರ್ತಕರು, ಬ್ಯಾಂಕ್ ಅಧಿಕಾರಿಗಳು, ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.