ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಗಾ ಪ್ರಗತಿ ಕುಂಠಿತ: ಪಿಡಿಒಗಳಿಗೆ ಸಿಇಒ ಅಶ್ವತಿ ತರಾಟೆ

Last Updated 8 ಜುಲೈ 2017, 5:18 IST
ಅಕ್ಷರ ಗಾತ್ರ

ಹರಪನಹಳ್ಳಿ: ಸ್ವಚ್ಛ ಭಾರತ ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ತಾಲ್ಲೂಕಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧನೆಯಾಗದೇ ಇರುವುದಕ್ಕೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಅಶ್ವತಿ ಅವರು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ತಾಲ್ಲೂಕು ಪಂಚಾಯ್ತಿಯ ರಾಜೀವ್‌ಗಾಂಧಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿ ಶೀಲನಾ  ಸಭೆಯಲ್ಲಿ  ಮಾತನಾಡಿದರು. ‘ನರೇಗಾ ಕಾರ್ಮಿಕರಿಗೆ ನಿಗದಿತ ಸಮಯದಲ್ಲಿ ಕೂಲಿ ಸಂದಾಯವಾಗಿಲ್ಲ. ಯೋಜನೆ ಅನುಷ್ಠಾನಕ್ಕೆ ಸಮರ್ಪಕವಾಗಿ ಆಗುತ್ತಿಲ್ಲ. ಇನ್ನೂ ಶೇ 90ರಷ್ಟು ಕೆಲಸ ನಡೆಯಬೇಕಾಗಿದೆ. ನಿಗದಿತ ಪ್ರಮಾಣದಷ್ಟು ಮಾನವ ದಿನಗಳನ್ನು ಸೃಷ್ಟಿಸದೇ ಇದ್ದರೆ ವೇತನ ತಡೆ ಹಿಡಿಯಲಾಗುವುದು’ ಎಂದು ಅಶ್ವತಿ ಪಿಡಿಒಗಳಿಗೆ ಎಚ್ಚರಿಕೆ ನೀಡಿದರು.

ತಾಲ್ಲೂಕಿನಲ್ಲಿ 24 ಸಾವಿರ ಶೌಚಾಲಯ ನಿರ್ಮಿಸುವ ಗುರಿ ಹೊಂದ ಲಾಗಿದೆ. ಕೇವಲ 2,058 ಶೌಚಾಲಯ ಪೂರ್ಣಗೊಂಡಿದೆ. ಮಾರ್ಚ್‌ ಅಂತ್ಯದೊಳಗೆ ಗುರಿ ಮುಟ್ಟಬೇಕು ಎಂದು ಆದೇಶಿಸಿದರು.

ನಂದಿಬೇವೂರು, ನಿಟ್ಟೂರು, ಮತ್ತಿಹಳ್ಳಿ ಗ್ರಾಮಗಳಲ್ಲಿ ನರೇಗಾ ಯೋಜನೆಯಡಿ 4 ಲಕ್ಷ ಮಾನವ ದಿನಗಳ ಕೆಲಸ ಕೊಡಬೇಕಾಗಿದೆ. ಇದುವರೆಗೆ ಕೇವಲ 1.6 ಲಕ್ಷ ಮಾನವ ದಿನಗಳ ಕೆಲಸ ನೀಡಲಾಗಿದೆ ಎಂದು ಯೋಜನಾಧಿಕಾರಿ ರಂಗಸ್ವಾಮಿ ಸೂಚಿಸಿದರು.

ಫಲಾನುಭವಿಗಳನ್ನು ಆಯ್ಕೆ ಮಾಡಿ ಜಿಲ್ಲಾ ಪಂಚಾಯ್ತಿ ಅನುಮೋದನೆ ಪಡೆಯಲು ಪಟ್ಟಿಯನ್ನು ಕಳುಹಿಸಿಕೊಡಿ ಎಂದು ಅವರು ಆದೇಶಿಸಿದರು. ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಷಡಕ್ಷರಪ್ಪ, ಬಿ.ರೇವಣ್ಣ, ರುದ್ರಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT