ಅಧ್ಯಕ್ಷೆ ಲಲಿತಾ ಅನಪೂರ ಮಾತನಾಡಿ, ‘ನಗರದ ಅಭಿವೃದ್ಧಿಗಾಗಿ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡ ಬೇಕಾದ ಅವಶ್ಯಕತೆ ಇದೆ. ನಗರದಲ್ಲಿ 31 ವಾರ್ಡ್ಗಳಿದ್ದು, ₹1 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಇದೆ. ಹೊಸ ಬಡಾವಣೆಯಲ್ಲಿ ಸಿಸಿ ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರದಿಂದ ಹೆಚ್ಚಿನ ಅನುದಾನ ನೀಡಬೇಕು’ ಎಂದರು.