‘ಶನಿವಾರ ಬೆಳಿಗ್ಗೆ ಈ ಬಗ್ಗೆ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿತ್ತು, ಆದರೆ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಈ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂದು ಸಂಜೆ ಸಭೆ ಕರೆದಿದ್ದಾರೆ ಎಂದು ಗೊತ್ತಾಗಿದೆ. ಸಭೆಯಲ್ಲಿ ರಸ್ತೆಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳದಿದ್ದರೆ ಪ್ರತಿಭಟನೆ ಮಾಡಲಾಗುವುದು’ ಎಂದರು. ಬಳಗದ ಸಂಚಾಲಕ ಎಂ. ಚಂದ್ರಶೇಖರ ಹೆಗ್ಡೆ, ಆರೂರು ತಿಮ್ಮಪ್ಪ ಶೆಟ್ಟಿ, ಕೃಷ್ಣರಾಜ್ ಶೆಟ್ಟಿ ಚೋರಾಡಿ ಇದ್ದರು.