ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಪುರದ ರೈತರಿಂದ ಮಾಹಿತಿ ಸಂಗ್ರಹ

Last Updated 8 ಜುಲೈ 2017, 10:34 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ಶಿಡ್ಲಘಟ್ಟ ರೇಷ್ಮೆ ರೈತ ಉತ್ಪಾದಕ ಸಂಸ್ಥೆಯ ಬಗ್ಗೆ ತಿಳಿದುಕೊಂಡು ತಮ್ಮ ಭಾಗದಲ್ಲೂ ಸ್ಥಾಪಿಸಬೇಕೆಂಬ ಉದ್ದೇಶದಿಂದ ಕನಕಪುರದ ಐವತ್ತು ಮಂದಿ ರೈತರೊಂದಿಗೆ ಭೇಟಿ ನೀಡಿದ್ದ ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ, ತಲಘಟ್ಟಪುರದ ಹಿರಿಯ ವಿಜ್ಞಾನಿ ಪ್ರಭಾಕರ್‌ರಾವ್ ತಿಳಿಸಿದರು.

ತಾಲ್ಲೂಕಿನ ಹಿತ್ತಲಹಳ್ಳಿಗೆ ಶುಕ್ರವಾರ ಶಿಡ್ಲಘಟ್ಟ ರೇಷ್ಮೆ ರೈತ ಉತ್ಪಾದಕ ಸಂಸ್ಥೆಯ ನಿರ್ದೇಶಕ ಹಾಗೂ ಪ್ರಗತಿಪರ ರೈತ ಎಚ್.ಕೆ.ಸುರೇಶ್ ಅವರ ತೋಟಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.

ಪ್ರಗತಿಪರ ರೇಷ್ಮೆ ಬೆಳೆಗಾರರಿಂದ ಮಾಹಿತಿ ಪಡೆಯುವುದು ಹಾಗೂ ರೇಷ್ಮೆ ರೈತ ಉತ್ಪಾದಕ ಸಂಸ್ಥೆಯನ್ನು ಕನಕಪುರದಲ್ಲೂ ಸ್ಥಾಪಿಸುವ ಉದ್ದೇಶವಿದೆ ಎಂದು ಅವರು ಹೇಳಿದರು.

ಪ್ರಗತಿಪರ ರೈತ ಹಿತ್ತಲಹಳ್ಳಿಗೋಪಾಲಗೌಡ ಅವರು ತಮ್ಮ ರೇಷ್ಮೆ ಅಭಿವೃದ್ಧಿಯ ಅನುಭವಗಳನ್ನು ಹಂಚಿಕೊಂಡರು. ರೇಷ್ಮೆ ರೈತ ಉತ್ಪಾದಕ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜನಾರ್ಧನಮೂರ್ತಿ ಮತ್ತು ಸಂಯೋಜಕರಾದ ವೆಂಕಟರೆಡ್ಡಿ ಗಿರಣಿ ಅವರು ರೈತ ಉತ್ಪಾದಕ ಸಂಸ್ಥೆಯ ಪರಿಕಲ್ಪನೆ, ಕಾರ್ಯಗಳು, ಪ್ರಯೋಜನಗಳನ್ನು ತಿಳಿಸಿಕೊಟ್ಟರು. ಬಂದಿದ್ದ ರೈತರು ತಮ್ಮ ಜಿಲ್ಲೆಯಲ್ಲಿಯೂ ಕಂಪೆನಿ ಪ್ರಾರಂಭಿಸುವ ಅಭಿಪ್ರಾಯವನ್ನು  ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT