ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ, ಆದರೆ ಅದನ್ನು ಎಚ್ಚರಿಕೆಯಿಂದ ಬಳಸುವಂತೆಯೂ ಸೂಚಿಸಲಾಗಿದೆ. ಜನರಿಗೆ ಹೆಚ್ಚಿನ ಹಾನಿ ಆಗಬಾರದು, ಆಸ್ತಿಪಾಸ್ತಿ ನಷ್ಟವಾಗದಂತೆ ನೋಡಿಕೊಳ್ಳಬೇಕು, ಮಹಿಳೆಯರ ಮೇಲೆ ದೌರ್ಜನ್ಯ ನಡೆಸಬಾರದು, ಲೂಟಿಗೆ ಇಳಿಯಬಾರದು ಎಂದು ಪೊಲೀಸರಿಗೆ ಎಚ್ಚರಿಕೆ ನೀಡಲಾಗಿದೆ ಎಂದೂ ಮುಖ್ಯಮಂತ್ರಿ ತಿಳಿಸಿದರು.